ಬಂಟ್ವಾಳ : ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ರಿ. ಮತ್ತು ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಬೊಂದೆಲ್ ಮಂಗಳೂರು ಇದರ ವತಿಯಿಂದ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ “ಪಾಲಿಟೆಕ್ನಿಕ್ಗಳ ಮೂಲಕ ಸಮುದಾಯ ಅಭಿವೃದ್ಧಿ ಯೋಜನೆ” ಯಡಿಯಲ್ಲಿ ಬೊಳ್ಳಾಯಿ ಮಸೀದಿ ಸಭಾಂಗಣದಲ್ಲಿ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮ ಜರಗಿತು.
ಸರಕಾರಿ ಮಹಿಳಾ ಪಾಲಿಟೆಕ್ನಿಕ್ ನ ಕೋ-ಆರ್ಡಿನೇಟರ್ ಶಿವಪ್ರಸಾದ್ ರೈ , ಸಿಬ್ಬಂದಿಗಳಾದ ರಾಕೇಶ್ ಶೆಟ್ಟಿ, ರಾಜೇಶ್ ಶೆಟ್ಟಿ , ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ದಾಸ್ ಕೊಟ್ಟಾರಿ ಮುನ್ನೂರು, ಕಲಾವಿದ ಪ್ರವೀಣ್ ಕಾಮಾಜೆ, ಶಿಕ್ಷಕಿ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.
