ಕೈಕಂಬ:ಪೊಳಲಿ ರಾಮಕೃಷ್ಣ ತಪೋವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಅ.24 ಬುಧವಾರ ಅಖಂಡ ಭಜನಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಮಕೃಷ್ಣ ಮಿಷನ್ ವಿದ್ಯಾಲಯದ ಕಾರ್ಯದರ್ಶಿ ಪರಮಪೂಜ್ಯ ಸ್ವಾಮಿ ಅಭಿರಾಮನಂದಜೀ ಮಹಾರಾಜ್ ಉದ್ಘಾಟಿಸಿದರು, ರಾಮಕೃಷ್ಣ ತಪೋವನದ ಸ್ವಾಮೀ ವಿವೇಕಚೈತನ್ಯಾನಂದ ಸ್ವಾಮೀಜಿ ಉಪಸ್ಥಿತರಿದ್ದರು. ಪೊಳಲಿ ಶ್ರೀ ರಾಜರಾಜೇಶ್ವರೀ ಭಜನಾ ಮಂಡಳಿಯಿಂದ ಭಜನೆ ಪ್ರಾರಂಭವಾಯಿತು. ಇಂದಿನಿಂದ 24ಗಂಟೆಗಳ ವರೆಗೆ ದ.ಕ.ಜಿಲ್ಲೆಯ ವಿವಿಧ ಭಜನಾ ಮಂಡಳಿಗಳಿಂದ ನಿರಂತರ ಭಜನಾ ಕಾರ್ಯಕ್ರಮ ನಡೆಯಲಿದೆ.


















