ಬಂಟ್ವಾಳ:ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ನಿವಾಸಿ, ರಿಕ್ಷಾ ಚಾಲಕ ಅಚ್ಚುತದಾಸ್ (52) ಇವರು ಹೃದಯಾಘಾತದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.

ಮೃತರಿಗೆ ತಂದೆ, ತಾಯಿ ಸಹಿತ ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಸಿದ್ಧಕಟ್ಟೆ ಪೇಟೆಯಲ್ಲಿ ಕಳೆದ 20 ವರ್ಷಗಳಿಂದ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು.
