ಬಂಟ್ವಾಳ : 2015-16ರ 14ನೇ ಹಣಕಾಸು ಆಯೋಗದ ಮೂಲಕ ರೂ.3.36ಲಕ್ಷ ಅನುದಾನದಲ್ಲಿ ಪುರಸಭಾ ವ್ಯಾಪ್ತಿಯ ಬಿ.ಕಸ್ಬಾ ಗ್ರಾಮದ ಕೊಂಗ್ರಬೆಟ್ಟು ನಲ್ಲಿ ನೂತನ ಕಾಂಕ್ರಿಟೀಕೃತ ರಸ್ತೆ ಉದ್ಘಾಟನೆಯನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಮಾಜಿ ಅಧ್ಯಕ್ಷೆ ವಸಂತಿ ಚಂದಪ್ಪ, ಪುರಸಭಾ ಸದಸ್ಯರಾದ ಪ್ರವೀಣ್ ಬಿ., ಗಂಗಾಧರ ಪೂಜಾರಿ, ಆಶ್ರಯ ಸಮಿತಿ ಸದಸ್ಯ ಸಂಜೀವ ಬಂಜನ್ ಮತ್ತಿತರರು ಉಪಸ್ಥಿತರಿದ್ದರು.

