ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಬಿ ಒಕ್ಕೂಟದ ಶ್ರೀರಕ್ಷಾ ಸ್ವ-ಸಹಾಯ ಸಂಘದ ಪ್ರಥಮ ವರ್ಷದ ವಾರ್ಷಿಕೋತ್ಸವವು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ಬಿ ಒಕ್ಕೂಟದ ಅಧ್ಯಕ್ಷ ಸುಂದರ ಆಚಾರ್ಯ ನೆಗಳಗುಳಿ ವಹಿಸಿದ್ದರು.
ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿವೃತ್ತ ಅಧಿಕಾರಿ ಎಂ ಜನಾರ್ಧನ ದೇವಾಡಿಗ, ವಲಯ ಮೇಲ್ವಿಚಾರಕ ಜನಾರ್ಧನ ಮತ್ತು ಸೇವಾಪ್ರತಿನಿಧಿ ಸರಿತಾ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಶಾರದಾ ಸ್ವಾಗತಿಸಿದರು. ರಂಜಿನಿ ವಂದಿಸಿದರು. ಅಶ್ವಿನಿ ನಿರೂಪಿಸಿದರು ಸಂಘದ ಎಲ್ಲಾ ಪದಾದಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

