ಬಂಟ್ವಾಳ : ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಶನ್ ಅಭಿಯಾನದಡಿ 39ನೇ ವಾರದ ಸ್ವಚ್ಛತಾ ಕಾರ್ಯಕ್ರಮವು ಬಂಟ್ವಾಳ ಕಸ್ಬಾ ಗ್ರಾಮದ ಅರಬ್ಬಿಗುಡ್ಡೆ ಅಂಗನವಾಡಿ ಆವರಣದ ಪರಿಸರದಿಂದ ಮಂಡಾಡಿ ಪರಿಸರದವರೆಗೆ ಪುರಸಭಾ ಸದಸ್ಯ ಗಂಗಾಧರ ಪೂಜಾರಿಯವರ ನೇತೃತ್ವದಲ್ಲಿ ಜರಗಿತು.

ಪುರಸಭಾ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್, ಆರೋಗ್ಯಾಧಿಕಾರಿ ರತ್ನಪ್ರಸಾದ್, ವೆಂಕಪ್ಪ ಪೂಜಾರಿ, ಪುರಸಭಾ ಸಿಬ್ಬಂದಿ, ಸ್ಥಳೀಯರು ಭಾಗವಹಿಸಿದರು.

