ವಿಟ್ಲ: ಮೇಗಿನಪೇಟೆ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ದಿನಾಚರಣೆ, ಗಾಂಧೀಜಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಮತ್ತು ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ವಿಟ್ಲ ಜೇಸೀಐ ಅಧ್ಯಕ್ಷ ಬಾಬು ಕೆ ವಿ ಚಾಲನೆ ನೀಡಿದರು.
ಮುಖ್ಯ ಅತಿಥಿಗಳಾಗಿ ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ವಸಂತ ಶೆಟ್ಟಿ, ಮಾಜಿ ಅಧ್ಯಕ್ಷ ಭಾಸ್ಕರ ಶೆಟ್ಟಿ, ನಿಯೋಜಿತ ಅಧ್ಯಕ್ಷ ಸಂಜೀವ ಪೂಜಾರಿ, ಮಹಿಳ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕಿ ರೋಹಿನಿ, ಸ್ತ್ರೀಶಕ್ತಿ ಗುಂಪುಗಳ ಅಧ್ಯಕ್ಷರಾದ ಶಾರದಾ ಮತ್ತು ಸುಂದರಿ ನೋಣಯ್ಯ ಪೂಜಾರಿ ಇವರು ಭಾಗವಹಿಸಿದ್ದರು. ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ವಠಾರವನ್ನು ಸ್ವಚ್ಛಗೊಳಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಸರಸ್ವತಿ ಕಾರ್ಯಕ್ರಮ ಸಂಯೋಜಿಸಿದರು. ಉಮಾವತಿ ಕೇಶವ ಸಹಕರಿಸಿದರು.

