ವಿಟ್ಲ: ವಿಟ್ಲದ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ತನ್ನ 60 ನೇ ವರ್ಷದ ಆಚರಣೆ ಸಂದರ್ಭದಲ್ಲಿ ರೂಪಾಯಿ ಹತ್ತು ಲಕ್ಷ ನೀಡಿದ್ದು, ಈ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಎಲ್ ಎನ್ ಕೂಡೂರು, ಉಪಾಧ್ಯಕ್ಷ ಹೆಚ್ ಜಗನ್ನಾಥ ಸಾಲಿಯಾನ್, ಮುಖ್ಯ ಕಾರ್ಯನಿರ್ವಾಹಕ ವಿ ಎಸ್ ಕೆದಿಲಾಯ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ, ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್, ಮುಖ್ಯ ಅಧಿಕಾರಿ ಲೀನಾ ಬ್ರುಟ್ಟೊ, ಸದಸ್ಯರುಗಳಾದ ರಾಮದಾಸ ಶೆಣೈ, ಚಂದ್ರಕಾಂತಿ, ಜಯಂತ, ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ವಿಟ್ಲ ರೋಟರಿಕ್ಲಬ್ನ ಸ್ಥಾಪಕಾಧ್ಯಕ್ಷ ಭಾಸ್ಕರ ಶೆಟ್ಟಿ ಹಾಗೂ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

