ಸುದ್ದಿ9ಕಿನ್ನಿಗೋಳಿ : ಕರ್ನಾಟಕ ಸರಕಾರದ ಮುಖ್ಯ ಮಂತ್ರಿ ಪರಿಹಾರ ನಿಧಿಯಿಂದ ಶೋಭ ರಾವ್ ಅವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ 25000 ರೂ. ಗಳ ಚೆಕ್ ನ್ನು ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಪಿ. ಹೆಗ್ಡೆ ಶುಕ್ರವಾರ ನೀಡಿದರು. ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜೋನ್ಸನ್ ಜೆರೋಮ್ ಡಿಸೋಜ, ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು ಮಾಜಿ ಉಪಾಧ್ಯಕ್ಷೆ ಹೇಮಲತಾ, ಫಿಲೋಮಿನಾ ಸಿಕ್ವೇರಾ, ಸುಜಾತ, ಮಾಧವ, ಪಿ.ಡಿ.ಒ ಅರುಣ್ ಪ್ರದೀಪ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

