ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ತುಂಬೆ ಸಮೀಪದ ರಾಮಲ್ಕಟ್ಟೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ.
ಮೃತರನ್ನು ಉತ್ತರ ಪ್ರದೇಶ ಮೂಲದ ಮುಹಮ್ಮದ್ ಶಾನು(18) ಎಂದು ಗುರುತಿಸಲಾಗಿದೆ. ಇವರು ತುಂಬೆ ಗ್ರಾಮ ಪಂಚಾಯಿತಿ ಕಚೇರಿ ಸಮೀಪದಲ್ಲಿರುವ ಸೆಲೂನ್ನಲ್ಲಿ ಕೆಲಸಕ್ಕೆಂದು ಕಳೆದ 15 ದಿನಗಳ ಹಿಂದೆ ಇಲ್ಲಿಗೆ ಬಂದಿದ್ದ ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

