ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಹಾವೇರಿ ಇವರ ಆಶ್ರಯದಲ್ಲಿ ಹಾವೇರಿ ಜಿಲ್ಲೆಯ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಕ್ರೀಡಾಪಟುಗಳ ತಂಡವು ಅವಳಿ ಪ್ರಶಸ್ತಿಯನ್ನು ಪಡೆದಿದೆ.
ಆಳ್ವಾಸ್ ಬಾಲಕರ ತಂಡವು ಕೋಲಾರ ಜಿಲ್ಲೆಯನ್ನು 41-12 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕಿರ ತಂಡವು ಧಾರವಾಡ ಜಿಲ್ಲೆಯನ್ನು 37-12 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.

ಬಾಲಕರ ವಿಭಾಗದಲ್ಲಿ ಉತ್ತಮ ದಾಳಿಗಾರ ಆಳ್ವಾಸ್ನ ರಕ್ಷಿತ್ ಎಸ್., ಹಾಗೂ ಸರ್ವಾಂಗೀಣ ಆಟಗಾರನಾಗಿ ಪ್ರವೀಣ್ ಎಸ್. ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಉತ್ತಮ ದಾಳಿಗಾರ್ತಿ ಆಳ್ವಾಸ್ನ ನಿಕ್ಷಿತಾ ಕೆ. ಹಾಗೂ ಸರ್ವಾಂಗೀಣ ಆಟಗಾರ್ತಿಯಾಗಿ ಧನಲಕ್ಷ್ಮಿ ಪ್ರಶಸ್ತಿಯನ್ನು ಪಡೆದಿದ್ದಾರೆ.

