ಮುಂಬೈ: ದೂರದರ್ಶನದಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಧಾರವಾಹಿ, ರಮಾನಂದ ಸಾಗರ್ ಅವರ ರಾಮಾಯಣದಲ್ಲಿ ವಿಭೀಷಣ ಪಾತ್ರ ನಿರ್ವಹಿಸಿದ್ದ ಪ್ರತಿಭಾವಂತ ಕಿರುತೆರೆ ನಟ, ಗುಜರಾತಿ ಮುಖೇಶ್ ರಾವಲ್ ಖಾಂಡಿವಿಲಿ ರೈಲು ನಿಲ್ದಾಣದ ಬಳಿ ಮಂಗಳವಾರ ಬೆಳಿಗ್ಗೆ ರಾವಲ್ ಶವ ಪತ್ತೆಯಾಗಿದೆ ಎಂದು ಸರಕಾರಿ ರೈಲ್ವೆ ಪೊಲೀಸರು ಹೇಳಿದ್ದಾರೆ.
ರಾವತ್[66] ರೈಲು ಹಳಿ ದಾಟುತ್ತಿದ್ದಾಗ ರೈಲು ದಿಕ್ಕಿ ಹೊಡೆದು ಮೃತ ಪಟ್ಟಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ. ಖಾಂಡಿವಿಲಿ ಪಶ್ಚಿಮ ಪ್ರದೇಶದಲ್ಲಿ ವಾಸವಾಗಿದ್ದ ರಾವಲ್ ಪತ್ನಿ, ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

