ಬೆಂಗಳೂರು; ರಾಜ್ಯ ಸರ್ಕಾರ ಪಡಿತರ ಧಾನ್ಯ ವಿತರಣೆ ವ್ಯವಸ್ಥೆಯನ್ನ ಮತ್ತಷ್ಟು ಉತ್ತಮಗೊಳಿಸಲು ಹಲವು ಸುಧಾರಣೆ ತರಲು ಮುಂದಾಗುತ್ತಿದೆ. ಆಹಾರ ಇಲಾಖೆ ದೇಶದಲ್ಲೇ ಮೊದಲ ಬಾರಿಗೆ ಆಹಾರ ಕೂಪನ್ ಜೊತೆಗೆ ನಗದು ಕೂಪನ್ ನೀಡಲು ಮುಂದಾಗಿದೆ. ಪ್ರಾಯೋಗಿಕವಾಗಿ 3 ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ತಿರ್ಮಾನಿಸಿದೆ.

stan_wawrinka_760x400

ಸದ್ಯ ಸರ್ಕಾರ ಪಡಿತರ ಚೀಟಿದಾರರಿಗೆ ವಿತರಿಸುತ್ತಿರುವ ಆಹಾರ ಧಾನ್ಯ ಇಷ್ಟವಾಗದೇ ಹೋದಲ್ಲಿ, ನಗದು ಕೂಪನ್ ಪಡೆದು ನಿಮಗೆ ಇಷ್ಟವಾದ ಆಹಾರ ಪದಾರ್ಥಗಳನ್ನ ಆಹಾರ ಇಲಾಖೆಯಿಂದ ಅನುಮತಿ ಪಡೆದ ಕಿರಾಣಿ ಅಂಗಡಿಗಳಲ್ಲಿ ಪಡೆಯಬಹುದಾಗಿದೆ. ಈ ಕೂಪನ್ ಬೆಂಗಳೂರು ಒನ್ , ಪಂಚಾಯತಿ ಕಚೇರಿಗಳಲ್ಲಿ ಪಡೆಯಬಹುದಾಗಿದೆ. ಮೊದಲಿಗೆ 3 ಸಾವಿರ ಕಾರ್ಡ್‌`ದಾರರಿಗೆ ಈ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ಬರಲಿದೆ ಎಂದು ಸಚಿವ ಖಾದರ್ ತಿಳಿಸಿದ್ದಾರೆ. ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ಸರ್ಕಾರ ತಿರ್ಮಾನಿಸಿದ್ದು, ಬಿಪಿಎಲ್ ಕಾರ್ಡ್`ದಾರರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ.

By suddi9

Leave a Reply

Your email address will not be published. Required fields are marked *