ವಿಟ್ಲ ಶ್ರೀ ಭಗವತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಶ್ರೀ ಭಗವತಿ ಯುವಕ ಮಂಡಲದ ವತಿಯಿಂದ ನಡೆದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಯಕ್ಷಗಾನ ಹಾಸ್ಯ ಕಲಾವಿದ ನಾರಾಯಣ ಪೂಜಾರಿ ಉಜಿರೆ ಮತ್ತು ಭಗವತಿ ದೇವಸ್ಥಾನದ ಮೋನಪ್ಪ ಗುರುಸ್ವಾಮಿ ಇವರನ್ನು ಯುವಕ ಮಂಡಲದ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯಕೆ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ, ಭಗವತಿ ದೇವಸ್ಥಾನದ ವಿ ಕೇಶವ ವಿಟ್ಲ, ಮಂಗೇಶ್ ಭಟ್, ಯುವಕ ಮಂಡಲದ ಗೌರವಾಧ್ಯಕ್ಷ ಸಂಜೀವ ಪೂಜಾರಿ ಭಾರತ್ ಶಾಮಿಯಾನ, ಅಧ್ಯಕ್ಷ ಮಾಧವ ಗೌಡ ಕಾನತ್ತಡ್ಕ, ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ, ಕೋಶಾಧಿಕಾರಿ ಶಶಿಧರ ಆಚಾರ್ಯ ಹಾಗೂ ಸದಸ್ಯರು ಉಪಸ್ಥತರಿದ್ದರು. ಹರೀಶ್ ಕೆ ಕಾರ್ಯಕ್ರಮ ನಿರ್ವಹಿಸಿದರು.

