ಎಡಪದವು:ಭಾರ್ಗವ ಮಿತ್ರವೃಂದ ಶಾಸ್ತಾವು,ಶಾಸ್ತಾವು ಶ್ರೀಭೂತನಾಥೇಶ್ವರ ಟ್ರಸ್ಟ್,ಜಿಲ್ಲಾ ಮಹಿಳಾ ಬಿಜೆಪಿ ಮೋರ್ಚಾ ಮತ್ತು ರೆಡ್ಕ್ರಾಸ್ ಸೊಸೈಟಿ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಶಾಸ್ತಾವು ದೇವಸ್ಥಾನದಲ್ಲಿ ಇತ್ತೀಚಿಗೆ ನಡೆಯಿತು.ಶಾಸ್ತಾವು ಶ್ರೀಭೂತನಾಥೇಶ್ವರ ದೇವಸ್ಥಾನದ ಮೊಕ್ತೇಸರ ವಿಜಯನಾಥ ವಿಠಲ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ,ಬಿಜೆಪಿ ಉತ್ತರ ಮಹಿಳಾ ಮೋರ್ಚಾ ಅಧ್ಯಕ್ಷೆ ಬಬಿತ ರವೀಂದ್ರ,ಭಾರತೀಯ ರೆಡ್ಕ್ರಾಸ್ ಸೊಸೈಟಿ ಪ್ರಮುಖರಾದ ಎಡ್ವಾರ್ಡ್ ವಾಸ್,ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ,ಭಾರ್ಗವ ಮಿತ್ರವೃಂದ ಅಧ್ಯಕ್ಷರಾದ ತಾರನಾಥ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು 55 ಜನರು ರಕ್ತದಾನ ಮಾಡಿದರು.ಹೇಮಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

