ಶ್ರೀನಗರ: ಪಾಕಿಸ್ಥಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಣೆ ಮಾಡಿದೆ. ಜಮ್ಮು ಕಾಶ್ಮೀರದ ಗಡಿ ರೇಖೆಯಲ್ಲಿ ಮತ್ತೆ ಗುಂಡಿನ ದಾಳಿ ನಡೆಸಿದ್ದು, ಓರ್ವ ಭಾರತೀಯ ಯೋಧ ಹತನಾಗಿದ್ದಾನೆ. ಇಬ್ಬರು ಯೋಧರಿಗೆ ತೀವ್ರ ಗಾಯಗಳಾಗಿವೆ.sl

ಪಲ್ಲನ್‌’ವಾಲಾ ಪೋಸ್ಟ್ ಬಳಿಯ ಅಖ್ನೂರ್ ಸೆಕ್ಟರ್‌’ನಲ್ಲಿ ಪಾಕ್ ಪಡೆಗಳು ಭಾರತೀಯ ಯೋಧರತ್ತ ಗುಂಡಿನ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ತಡರಾತ್ರಿಯಿಂದ ಮಂಗಳವಾರ ಮುಂಜಾನೆಯವರೆಗೂ ಉಭಯ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.

ಈ ವಿಷಯ ಇಂದು ರಾಜ್ಯಸಭೆಯಲ್ಲಿ ಚರ್ಚೆಗೆ ಬಂದಿದೆ. ಪಾಕ್ ಕುಚೋದ್ಯಕ್ಕೆ ತಕ್ಕ ಉತ್ತರ ನೀಡುವಂತೆ ಪ್ರತಿಪಕ್ಷಗಳು ಸರ್ಕಾರವನ್ನು ಆಗ್ರಹಿಸಿವೆ.

By suddi9

Leave a Reply

Your email address will not be published. Required fields are marked *