ಬಂಟ್ವಾಳ: ಬೆಂಜನಪದವು ಕರಾವಳಿ ಸೈಟಿನಲ್ಲಿ ನಿನ್ನೆ ಬೆಳಿಗ್ಗೆ ನಡೆದ ರಿಕ್ಷಾಚಾಲಕ ಕಲಾಯಿ ನಿವಾಸಿ ಅಶ್ರಫ್ ಕೊಲೆಯನ್ನು ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ಖಂಡಿಸಿದ್ದಾರೆ
ಆಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನೈಜ ಆರೋಪಿಗಳನ್ನು ಪೋಲಿಸರು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಿರಲಿ ಮತ್ತು ಬಂಟ್ವಾಳ ತಾಲೂಕಿನ ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕಾಗಿ ವಿನಂತಿಸಿಕೊಂಡಿದ್ದಾರೆ.
