ಸುದ್ದಿ9ಕುಪ್ಪೆಪದವು:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ 81ನೇ ಶಾಖೆ ಮಂಗಳೂರು ತಾಲೂಕಿನ ಕುಪ್ಪೆಪದವು ಪಣಿರಾಜ್ ಕಾಂಪ್ಲೆಕ್ಸ್ನಲ್ಲಿ ಜು.30ರಂದು ಬೆಳಗ್ಗೆ 10.30ಕ್ಕೆ ಉದ್ಘಾಟನೆಗೊಂಡಿತು.
ನೂತನ ಶಾಖೆಯನ್ನು ನಬಾಡರ್್ನ ಮುಖ್ಯ ಮಹಾ ಪ್ರಬಂಧಕ ಜಿ.ಆರ್.ಚಿಂತಲ ಉದ್ಘಾಟಿಸಿದರು. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನೀಲಯ ಎಂ.ಅಗರಿ ಭದ್ರತಾ ಕೋಶ ಹಾಗೂ ಕುಪ್ಪೆಪದವು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಎಂ.ಗಣಕೀಕರಣ ಉದ್ಘಾಟಿಸಿದರು. ಕುಪ್ಪೆಪದವು ಕಾವೇರಿ ವಿದ್ಯಾ ಸಂಸ್ಥೆಯ ಸಂಚಾಲಕ ಎಂ.ಐ.ಕುಲವೂರು ಹಾಗೂ ಗ್ರೆಗರಿ ರೋಜಾರಿಯಾ ಸಮಾರಂಭದಲ್ಲಿ ಭಾಗವಹಿಸಿದರು. ಈ ಶಾಖೆ ಸಂಪೂರ್ಣ ಗಣಕೀಕೃತಗೊಂಡು ಏಕಗವಾಕ್ಷಿ, ಕೋರ್ ಬ್ಯಾಂಕಿಂಗ್ ಮತ್ತು ಆರ್ಟಿಜಿಎಸ್/ನೆಪ್ಟ್ ಸೌಲಭ್ಯದೊಂದಿಗೆ ಗ್ರಾಹಕರಿಗೆ ತ್ವರಿತಗತಿಯ ಸೇವೆ ನೀಡಲಿದೆ.
















