ಅಮ್ಮುಂಜೆ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಬೆಂಜನಪದವು ಶಿವಾಜಿ ನಗರ ನಿವಾಸಿ ಹರೀಶ್(30)ಎಂಬವರು ಎರಡು ದಿನಗಳಿಂದ ಕಾಣೆಯಾಗಿದ್ದು ಮನೆಯವರು ಎರಡು ದಿನಗಳಿಂದ ಹುಡುಕಾಟದಲ್ಲಿ ತೊಡಗಿದ್ದರು. ಆದರೆ ಇಂದು ಅವರ ಮೃತ ದೇಹ ಮನೆಯ ಹತ್ತಿರದ ಬಾವಿಯಲ್ಲಿ ಪತ್ತೆಯಾಗಿದೆ. ಮೃತ ಹರೀಶ್ ಅವಿವಾಹಿತರಾಗಿದ್ದು ಕಟ್ಟಡ ನಿರ್ಮಾಣದ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆ ಯಾವ ಕಾರಣಕ್ಕೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿಲ್ಲ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಆಗಮಿಸಿ ಪರೀಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

