ಮುಂಬಯಿ: ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಪರಮಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಮತ್ತು ಕಿರಿಯ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆಶೀರ್ವದಗಳೊಂದಿಗೆ ಆಗಸ್ಟ್,19ರ ಶನಿವಾರ ಸಂಜೆ 7.00 ಗಂಟೆಯಿಂದ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮಿಜಿ ಅವರಿಂದ ದಾಸವಾಣಿ ಕಾರ್ಯಕ್ರಮ ನಡೆಯಲಿದೆ. ಅಧಿಕ ಮಾಹಿತಿಗಾಗಿ ಪೇಜಾವರ ಮಠದ ದೂರವಾಣಿ 26126614 ಸಂಖ್ಯೆಗೆ ಸಂಪರ್ಕಿಸುವಂತೆ ಕೋರಲಾಗಿದೆ. ಈ ದಾಸವಾಣಿ ಕಾರ್ಯಕ್ರಮಕ್ಕೆ ಎಲ್ಲರೂ ಭಾಗವಹಿಸಬೇಕೆಂದು ಶಾಖೆಯ ಪ್ರಬಂಧಕರುಗಳಾದ ಪ್ರಕಾಶ ಆಚಾರ್ಯ ರಾಮಕುಂಜ ಈ ಮೂಲಕ ತಿಳಿಸಿದ್ದಾರೆ.

