ಬಂಟ್ವಾಳ: ತಾಲ್ಲೂಕಿನ ರಾಯಿಯಲ್ಲಿ ಶನಿವಾರ ಏರ್ಪಡಿಸಿದ್ದ ಆರನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು.
ಹೊಸ್ಮಾರು ಬಲ್ಯೊಟ್ಟು ವಿಖ್ಯಾತಾನಂದ ಸ್ವಾಮೀಜಿ, ಎಪಿಎಂಸಿ ಸದಸ್ಯ ಎಂ.ಪದ್ಮರಾಜ ಬಲ್ಲಾಳ್, ಸಮಿತಿ ಅಧ್ಯಕ್ಷ ಗೋಪಿನಾಥ ರೈ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ರಾಡ್ರಿಗಸ್, ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ, ಪ್ರಮುಖರಾದ ಬೇಬಿ ಕುಂದರ್, ಲೋಕೇಶ ಪೆದಮಲೆ, ಮೆಲ್ವಿನ್ ಜಯಕರ್ ಮತ್ತಿತರರು ಇದ್ದರು.
