ವಿಟ್ಲ: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ವಿಟ್ಲ ಘಟಕ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ವಿಟ್ಲ ವಿಠಲ ಪ್ರೌಢ ಶಾಲಾ ಶಿಕ್ಷಕರಿಗೆ ಮತ್ತು ಶಾಲಾ ಸಿಬಂಧಿಯವರಿಗೆ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಯೋಜನೆಯ ಪ್ರಧಾನ ಸಂಚಾಲಕ ಟಿ ತಾರಾನಾಥ ಕೊಟ್ಟಾರಿ, ಬಂಟ್ವಾಳ ತಾಲೂಕು ವಿಸ್ತರಣಾಧೀಕಾರಿ ಸದಾಶಿವ ಅಳಿಕೆ, ಒಡಿಯೂರು ಶ್ರೀ ವಿವಿದೊದ್ದೇಶ ಸೌಹಾರ್ಧ ಸಹಕಾರಿ ನಿಯಮಿತ ನಿರ್ದೇಶಕ ಗಣೇಶ್ ರೈ ಗಮಿ, ವಿಟ್ಲ ಶಾಖಾ ವ್ಯವಸ್ಥಾಪಕ ಸದಾಶೀವ ಶೆಟ್ಟಿ ಒಡಿಯೂರು, ಪೂರ್ವ ವಲಯ ಸಂಯೋಜಕಿ ಕಾವ್ಯಲಕ್ಷ್ಮಿ, ವಿಟ್ಲ ಕಸ್ಬಾ ಸೇವಾಧೀಕ್ಷಿತೆ ಸುಮಲತಾ, ವಿಟ್ಲ ಮಂಡಲ ಕಾರ್ಯದರ್ಶಿ ಸುನಿಲ್ ವಿಟ್ಲ ಜತೆಕಾರ್ಯದರ್ಶಿ ಉಮಾವತಿ ಒಡಿಯೂರು ಸಂಘಟನಾ ಕಾರ್ಯದರ್ಶಿ ಶೇಖರ ಮಲಾರ್, ಸದಸ್ಯ ಹೇಮಾನಂದ ಶೆಟ್ಟಿ, ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ ಕ ಶಿ ವಿಶ್ವನಾಥ, ಕಾರ್ಯದರ್ಶಿ ಯಶವಂತ ವಿಟ್ಲ, ಸದಸ್ಯ ಪದ್ಮಯ್ಯ ಗೌಡ, ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಎ ಎಸ್, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಸಹ ಶಿಕ್ಷಕರು , ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
