ಫರಂಗಿಪೇಟೆ: ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಗಾರ್ಡನ್ ಹೊಟೇಲ್ ಬಳಿ ಸೋಮವಾರ ರಾತ್ರಿ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಯುವಕನೊರ್ವ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಒರ್ವ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಮೃತರನ್ನು ಮಂಗಳೂರು ಹೊರವಲಯದ ಅಡ್ಯಾರ್ ನಿವಾಸಿ ಝೀಯಾ ಎಂದು ಗುರುತಿಸಲಾಗಿದೆ..ಗಾಯಾಳುಗಳಾದ ಅನಿಸ್,ಮುಶ್ತಾಕ್,ಎಂಬವರನ್ನು ತುಂಬೆಯ ಖಾಸಾಗಿ ಆಸ್ಪತ್ರೆಗೆ ದಾಖಲಿಸಿಸಲಾಗಿದೆ.
ತಂಡಗಳ ನಡುವಿನ ದಾಳಿಯಲ್ಲಿ ಝೀಯಾ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಾಗಿದೆ.
