ನವರಾತ್ರಿಯ ಪ್ರಯುಕ್ತ ಬಿ.ಸಿ.ರೋಡಿನ ರಕ್ತೇಶ್ವರಿ ಗುಡಿಯಲ್ಲಿ ನಡೆಯುವ 9 ದಿನಗಳ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಎರಡನೆಯ ದಿನ ಸೆಪ್ಟೆಂಬರ್ 22ರಂದು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ(ರಿ.), ಪುತ್ತೂರು ಇದರ ಬಿ.ಸಿ.ರೋಡ್ ಶಾಖೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ನಟುವಾಂಗದಲ್ಲಿ ವಿದ್ವಾನ್ ದೀಪಕ್ ಕುಮಾರ್, ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ಶ್ರೀ ಗೀತೇಶ್ ನೀಲೇಶ್ವರ ಹಾಗೂ ಕೊಳಲಿನಲ್ಲಿ ಶ್ರೀ ರಾಜಗೋಪಾಲ್ ಕಾಞಂಗಾಡ್, ವರ್ಣಾಲಂಕಾರದಲ್ಲಿ ಭಾವನಾ ಕಲಾ ಆಟ್ರ್ಸ್ ಪುತ್ತೂರು ಇವರು ಸಹಕರಿಸಿದ್ದರು.

