ಬಂಟ್ವಾಳ ತಾಲ್ಲೂಕು ಸಹಿತ ಜಿಲ್ಲೆಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ಸಾಲ ವಿತರಣೆ ಮತ್ತು ವಸೂಲಾತಿ ಸಾಧನೆಗಾಗಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ದೊರೆತಿದೆ. ಬ್ಯಾಂಕಿನ ಜಿಲ್ಲಾ ನಿರ್ದೇಶಕ ಸುದರ್ಶನ್ ಜೈನ್ ಮತ್ತು ಜಿಲ್ಲಾ ವ್ಯವಸ್ಥಾಪಕ ಸುರೇಶ್ ಇವರು ಬೆಂಗಳೂರಿನಲ್ಲಿ ಈಚೆಗೆ ಪ್ರಶಸ್ತಿ ಸ್ವೀಕರಿಸಿದರು. ಬ್ಯಾಂಕಿನ ರಾಜ್ಯಾಧ್ಯಕ್ಷ ಕೆ.ಷಡಕ್ಷರಿ, ಉಪಾಧ್ಯಕ್ಷ ಈಶ್ವರ ನಾರಾಯಣ ನಾಯ್ಕ್, ವ್ಯವಸ್ಥಾಪಕ ನಿರ್ದೇಶಕ ಎ.ಸಿ.ದಿವಾಕರ ಮತ್ತಿತರರರು ಇದ್ದರು.
