ಬಂಟ್ವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಲೋಕಾರ್ಪಣೆಗೊಳ್ಳಲಿರುವ ಮಿನಿ ವಿಧಾನ ಸೌಧಕ್ಕೆ ಭೇಟಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್.ಎಸ್ ಅವರು ಬಂಟ್ವಾಳಕ್ಕೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮ ಪ್ರಯುಕ್ತ ಜಿಲ್ಲಾಡಳಿತ, ತಾಲೂಕಾಡಳಿತ ನಡೆಸುವ ಪೂರ್ವ ತಯಾರಿ ಕಾರ್ಯವನ್ನು ವೀಕ್ಷಣೆ ನಡೆಸಿದರು. 
ಕಾನೂನು ಸುವ್ಯವಸ್ಥೆಯ ಬಗ್ಗೆ ತಹಶೀಲ್ದಾರ್ ಪುರಂದರ ಹೆಗ್ಡೆ ಅವರೊಂದಿಗೆ ಇಲಾಖಾಧಿಕಾರಿಗಳಲ್ಲಿ ಚರ್ಚಿಸಿ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರನ್ನು ತಹಶೀಲ್ದಾರರು ಆತ್ಮೀಯತೆಯಿಂದ ಸ್ವಾಗತಿಸಿದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

