ಮಂಗಳೂರು: ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಆಗಮಿಸಿದ ಮೋದಿಗೆ ಪೂರ್ಣಕುಂಭದೊಂದಿಗೆ ಭವ್ಯವಾಗಿ ಸ್ವಾಗತ ನೀಡಲಾಯಿತು.ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಬಿಜೆಪಿ ರಾಜ್ಯಾಧಯಕ್ಷ ಬಿ ಎಸ್ ಯಡಿಯೂರಪ್ಪ ಇನ್ನಿತರ ಮುಖಂಡರು ಜತೆ ದೇವಸ್ಥಾನದ ಒಳಗಡೆ ಪ್ರವೇಶಿಸಿದ ಮೋದಿ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲ್ಲಿದ್ದಾರೆ.ಇನ್ನು ಕೆಲವು ಹೊತ್ತುಗಳ ಕಾಲ ದೇವಸ್ಥಾನಗಳ ಒಳಗಡೆ ರುದ್ರಾಭಿಷೇಕ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಉಜಿರೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ.
