ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು ಅಲ್ಲಿಂದ ಧರ್ಮಸ್ಥಳಕ್ಕೆ ವಿಮಾನ ಮೂಲಕ ತೆರಳಿದ್ದಾರೆ.
ಮಂಗಳೂರಿನಲ್ಲಿ ಬಿಜೆಪಿ ಮುಖಂಡರಾದ ಕೇಂದ್ರ ಸಚಿವ ರಾದ ಅನಂತ್ ಕುಮಾರ್ , ಸದಾನಂದ ಗೌಡ ಹಾಗೂ ಕರ್ನಾಟಕ ಸಚಿವ ಯು.ಟಿ.ಖಾಧರ್, ಮೇಯರ್ ಕವಿತಾ ಸನಿಲ್ ಸ್ವಾಗತಿಸಿದರು. ಧರ್ಮಸ್ಥಳಕ್ಕೆ ಐಎಎಫ್ ವಿಮಾನದಲ್ಲಿ ಬಂದಿಳಿದ ಮೋದಿಗೆ ಸಾಂಪ್ರದಾಯಿಕ ಭವ್ವ ಸ್ವಾಗತ ನೀಡಲಾಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದರು.