ಪದ್ಮನಾಭ ಎಸ್.ಪಯ್ಯಡೆ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ
ಮುಂಬಯಿ, : ಯೂತ್ ಬಂಟ್ಸ್ ಮಂಗಳೂರು ಇದೇ ಡಿ.9 ಮತ್ತು 10ರಂದು ಮಂಗಳೂರುನ ನೆಹರೂ ಮೈದಾನದಲ್ಲಿ ಆಯೋಜಿಸಿದ `ಅಂತಾರಾಷ್ಟ್ರೀಯ ಬಂಟರ ಕಬಡ್ಡಿ’ ಪಂದ್ಯಾಟದ ಸಭೆಯನ್ನು ಇಂದಿಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಕಾರ್ಯಕ್ರಮ ಉದ್ಘಾಟಿಸಿದರು. ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು.
ಪುತ್ತೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಚಂದ್ರಹಾಸ ರೈ, ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ರತನ್ ಶೆಟ್ಟಿ, ಉಳ್ಳಾಲ ವಲಯ ಬಂಟರ ಸಂಘ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು, ಜಯಕರ್ನಾಟಕ ಯುವ ಮುಖಂಡ ಸಹಜ್ ರೈ ಬಳಜ್ಜ, ಜಪ್ಪಿನಮೊಗರು ಯುವ ಬಂಟರ ಸಂಘ ಅಧ್ಯಕ್ಷ ಸುನೀಲ್ ಶೆಟ್ಟಿ ಉಪಸ್ಥಿತರಿದ್ದರು.

