ಮ0ಗಳೂರು: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು, ರಾಷ್ಟ್ರೀಯ ಹಾಲು ದಿನಾಚರಣೆಯ ಅಂಗವಾಗಿ ತಾಂತ್ರಿಕ ಉಪನ್ಯಾಸ, ಡಾ. ವರ್ಗೀಸ್ ಕುರಿಯನ್ ಕುರಿತ ಪುಸ್ತಕ ಬಿಡುಗಡೆ ಹಾಗೂ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ರಾಷ್ಟ್ರೀಯ ಡೈರಿ ಎಕ್ಸಲೆನ್ಸಿ ಪ್ರಶಸ್ತಿಯಿಂದ ಪುರಸ್ಕøತಗೊಂಡ ಸಂದರ್ಭದಲ್ಲಿ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಅಭಿನಂದನಾ ಕಾರ್ಯಕ್ರಮ ನವೆಂಬರ್ 26 ರಂದು ಮಂಗಳೂರಿನ ಎಸ್.ಸಿ,ಡಿ.ಸಿ.ಸಿ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಸಹಕಾರಿ ಹಾಲು ಒಕ್ಕೂಟ ಕೊಡವೂರು ರವಿರಾಜ್ ಹೆಗ್ಡೆ ವಹಿಸುವರು. ಡಾ. ವರ್ಗೀಸ್ ಕುರಿಯನ್ ಕುರಿತ ಪುಸ್ತಕ ಬಿಡುಗಡೆಯನ್ನು ಕೆಎಂಎಫ್ ವ್ಯವಸ್ಥಾಪಕ ರಾಕೇಶ್ ಸಿಂಗ್, ಐ.ಎ.ಎಸ್ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
