ಬಂಟ್ವಾಳ : ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾಗಿ ವಿಟ್ಲಮುಡ್ನೂರು ಗ್ರಾ.ಪಂ. ಸದಸ್ಯ ಸಿದ್ದೀಕ್ ಸರವು ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತ್ ಸದಸ್ಯರಾಗಿ, ಪಕ್ಷದ ತಳಮಟ್ಟದ ಸಕ್ರಿಯ ಕಾರ್ಯಕರ್ತರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇವರ ಸೇವೆಯನ್ನು ಗುರುತಿಸಿ ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ವಿಶೇಷ ಶಿಫಾರಸ್ಸು ನಡೆಸಿದ್ದು, ಇವರನ್ನು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಸದಸ್ಯರನ್ನಾಗಿ ಸರಕಾರ ನೇಮಿಸಿ ಆದೇಶ ಹೊರಡಿಸಿದೆ.
