ಬಂಟ್ವಾಳ: ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ಮನೆಗೆ ವಾಪಾಸು ಬರದೆ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರನ್ನು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನೀರಪಾದೆ ನಿವಾಸಿ ದಿನೇಶ್ 38 ಎಂದು ಗುರುತಿಸಲಾಗಿದೆ. ದಿನೇಶ್ ಅವರು ಅಂಗವಿಕಲಾರಿದ್ದು ಅವರು ಹೋಟೆಲ್ ಕೆಲಸಕ್ಕೆಂದು ಮಂಗಳೂರಿಗೆ ಹೋದವರು ವಾಪಾಸು ಮನೆಗೆ ಬಂದಿಲ್ಲ ಎಂದು ಇವರ ತಾಯಿ ಅಪ್ಪಿ ನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
