ಕಲಬುರಗಿ: ಮುಂದಿನ ಚುನಾವಣೆಯಲ್ಲಿ ಹೈದರಬಾದ್-ಕರ್ನಾಟಕ ಭಾಗದ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಡಾ.ಶರಣು ಪಾಟೀಲ ಇದ್ದು, ನಾನು ಬೇಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜಿಲ್ಲೆಯ ಅಫಝಲ್ ಪುರ, ಸೇಡಂ ಹಾಗೂ ಜೇವರ್ಗಿಯಲ್ಲಿ ಸುಮಾರು 947 ಕೋ.ರೂ.ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿ ನಾಯಕರ ಸೋಲಿಸಲು ಈ ಸಚಿವರು ಸಿದ್ಧರಿದ್ದು, ಇನ್ನು ಮುಂದಿನ ದಿನಗಳಲ್ಲಿ ಬಿಜೆಪಿ ಶಾಸಕರು ನಮ್ಮ ಪಕ್ಷಕ್ಕೆ ಸೇರಲಿದ್ದಾರೆ ಎಂದರು.
ಲಿಂಗಾಯತ ಧರ್ಮದ ವಿಚರವಾಗಿ ಲಿಂಗಾಯತ ಹಾಗೂ ವೀರಶೈವ ಸಂಘಟನೆಗಳು ಪ್ರತ್ಯೇಕವಾಗಿ ಮನವಿ ಸಲ್ಲಿಸಿದ್ದು, ಇದನ್ನು ಅಲ್ಪಸಂಖ್ಯಾತ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.

