ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ೧೧ ನೇ ವಾರ್ಡಿನಲ್ಲಿ ಪುರಸಭಾ ಎಸ್.ಸಿ.ಎಪ್.ಸಿ ಅನುದಾನದಲ್ಲಿ ೧೫ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮೊಡಂಕಾಪು,ರಾಜೀವ ಪಲ್ಕೆ. ಮೇಲಿನ ರಾಜೀವ ಪಲ್ಕೆ,,ಯೋಗಹೋಳ್ಳರ ರಸ್ತೆ ಕಾಂಕ್ರೀಟಿಕರಣ ಮತ್ತು ಕಾಂಕ್ರೀಟ್ ಚರಂಡಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆ ಯನ್ನು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಸದಸ್ಯ ಸದಾಶಿವ ಬಂಗೇರ, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ನಾಮನಿರ್ದೇಶನ ಸದಸ್ಯ ಲೋಲಾಕ್ಷ,ವಿಜಯ ಬ್ಯಾಂಕ್ ಮ್ಯಾನೇಜರ್ ಬೇಬಿ ಕುಂದರ್, ಎಲ್ ಡಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ಪುರಸಭಾ ಸಹಾಯಕ ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೋಮತ್ತಿತರರು ಉಪಸ್ಥಿತರಿದ್ದರು
