ಬೆಳಗಾವಿ: ಕೋರೆಗಾಂವ್ ಹಿಂಸಾಚಾರ ಖಂಡಿಸಿ ನಗರದಲ್ಲಿ ದಲಿತಪರ ಸಂಘಟನೆಗಳ ಕೆಲ ಕಾರ್ಯಕರ್ತರು ಪ್ರತಿಭಟನೆಗೆ ತೆರಲುತ್ತಿದ್ದ ವೇಳೆ 15 ಕ್ಕೂ ಹೆಚ್ಚು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಕೋರೆಗಾಂವ್ ಹಿಂಸಾಚಾರ ವಿರುದ್ಧ ದಲಿತಪರ ಸಂಘಟನೆಗಳು ಇಂದು ನಗರದ ಬೋಗಾರವೇಸ್ ನಿಂದ ಪ್ರತಿಭಟನಾ ಮೆರವಣಿಗೆ ಆಯೋಜಿಸಿದ್ದು, ಈ ಹಿನ್ನೆಲೆ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ಕೆಲ ಪ್ರತಿಭಟನಾಕಾರರು ಬೀಮ್ಸ್ ರಸ್ತೆಯ 15 ಕ್ಕೂ ಹೆಚ್ಚು ಅಂಗಡಿಗಳ ಮೇಲೆ ಏಕಾಏಕಿ ಅಂಗಡಿಗಳಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.
ಈ ಕಿಡಿಕೇಡಿಗಳ ಅಟ್ಟಹಾಸಕ್ಕೆ ಅಂಗಡಿಗಳ ಗಾಜು ಪುಡಿಪುಡಿಯಾಗಿದ್ದು, ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ.


