ದ.ಕ., ಉಡುಪಿ, ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಗಳ ಕನ್ನಡ ಯುವ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವವರ ವಯಸ್ಸು 45ಕ್ಕೆ ಮೀರಿರಬಾರದು. ಗ್ರಾಮೀಣ, ಮಾನವೀಯ ಮತ್ತು ಅಭಿವೃದ್ಧಿಪರ ವರದಿಗಳನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿ 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ.
2017 ನೇ ಸಾಲಿನ ಪ್ರಶಸ್ತಿಗೆ ಜ. 1ರಿಂದ ಡಿ. 31ರವರೆಗಿನ ವರದಿಗಳನ್ನು ಪರಿಗಣಿಸಲಾಗುವುದು. ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವವರು ವರದಿಯ ನಾಲ್ಕು ಪ್ರತಿಗಳನ್ನು(ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು.
ವರದಿ ಪ್ರಕಟವಾದ ದಿನಾಂಕದ ಕುರಿತಂತೆ ಸೂಕ್ತ ದಾಖಲೆ ಅಗತ್ಯ. ಪ್ರಧಾನ ಕಾರ್ಯದರ್ಶಿ , ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಉರ್ವಮಾರ್ಕೆಟ್ ಮಂಗಳೂರು -6 ಈ ವಿಳಾಸಕ್ಕೆ ಕಳುಹಿಸುವಂತೆ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ಕೋರಿದ್ದಾರೆ.
