ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ಗುರುವಾರ ನಡೆದಿದೆ.
ರನ್ ವೇ ಸಮೀಪವೇ ಟ್ರ್ಯಾಕ್ಟರ್ ವೊಂದು ನಿಲ್ಲಿಸಲಾಗಿತ್ತು, ಆಗ ಮುಂಬೈಯತ್ತ ಸಾಗಬೇಕಾಗಿದ್ದ ವಿಮಾನವೊಂದು ಟೇಕಾಫ್ ಆಗುತ್ತಿದ್ದುದು ಏರ್ ಟ್ರಾಫಿಕ್ ಕಂಟ್ರೋಲರ್ ಗಮನಕ್ಕೆ ಬಂದಿತ್ತು, ಎಟಿಎಸ್ ಸಿಬ್ಬಂದಿ ಕೂಡಲೇ ವಿಮಾನದ ಪೈಲಟ್ ಗೆ ಸಂದೇಶ ರವಾನಿಸಿದ್ದರಿಂದ ಈ ಅನಾಹುತ ತಪ್ಪಿದೆ ಎನ್ನಲಾಗಿದೆ.
ಒಂದು ವೇಳೆ ವಿಮಾನ ಟೇಕಾಫ್ ಆಗಿದ್ದರೆ, ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆಯುವ ಮೂಲಕ ಅಪಘಾತ ಸಂಭವಿಸುತ್ತಿತ್ತು. ಸಮಯಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದಂತಾಗಿದೆ.


