ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರು ಮಾನಸಿಕ ಸಿಮಿತ ಕಳೆದುಕೊಂಡು ಆರೆಸ್ಸೆಸ್, ಬಿಜೆಪಿ ಹಾಗೂ ಬಜರಂಗದಳವನ್ನು ಉಗ್ರಗಾಮಿ ಎಂದು ಬಿಂಬಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡುತ್ತಿದ್ದು, ಗೋವಾ ಸಿಎಂ ಬಿಎಸ್ವೈಗೆ ಪತ್ರ ಬರೆದಾಗ ಕೂಡಲೇ ಅದನ್ನು ಟ್ರಿಬ್ಯುನಲ್ ಮುಂದೆ ತೆಗೆದುಕೊಂಡು ಹೋಗಬೇಕಿತ್ತು ಎಂದರು.
ಸಿಎಂ ಸಿದ್ದರಾಮಯ್ಯ ನಿನ್ನೆ ಹೇಳಿದ್ದರು, ಇಂದು ಯೂಟರ್ನ್ ಹೊಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮಹಾ ಸುಳ್ಳುಗಾರ ಎಂದು ಏಕವಚನದಲ್ಲಿ ಟೀಕಿಸಿದರು.

