ಬಂಟ್ವಾಳ :ತಾಲ್ಲೂಕಿನ ನರಿಕೊಂಬು ಗ್ರಾಮದ ಜನತಾಗ್ರಹ ಶ್ರೀ ವೀರಮಾರುತಿ ಮಂದಿರ ಬಳಿ ರೂ 15ಲಕ್ಷ ವೆಚ್ಚದ ಕಾಂಕ್ರಿಟೀಕರಣ ರಸ್ತೆ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುರುವಾರ ಉದ್ಘಾಟಿಸಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ, ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಉಮೇಶ ಬೋಳಂತೂರು, ತಾಲ್ಲೂಕು ಪಂಚಾಯಿತಿ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಪ್ರಮುಖರಾದ ಎನ್.ಪ್ರಕಾಶ ಕಾರಂತ, ಆಲ್ಫೋನ್ಸ್ ಮಿನೇಜಸ್, ಆಲ್ಬರ್ಟ್ ಮಿನೇಜಸ್, ರವೀಂದ್ರ ಸಪಲ್ಯ, ಸುಲೇಮಾನ್, ಜುಬೇದಾ ಮತ್ತಿತರರು ಇದ್ದರು.
