ಕಣ್ಣೂರು (ಕೇರಳ): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯನ ಹತ್ಯೆ ಖಂಡಿಸಿ ಬಿಜೆಪಿ ಕರೆ ನೀಡಿದ ಬಂದ್ ಸಂದರ್ಭ ಜಿಲ್ಲೆಯಲ್ಲಿ ಶನಿವಾರ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಬಿವಿಪಿ ಸದಸ್ಯ ಶ್ಯಾಂ ಪ್ರಸಾದ್ ಶುಕ್ರವಾರ ಬೈಕ್ನಲ್ಲಿ ಕೂತುಪರಂಬದಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದಾಗ ಮೂವರ ಗ್ಯಾಂಗ್ ಅವರನ್ನು ಇರಿದು ಹತ್ಯೆ ಮಾಡಿದೆ.
ಈ ಹತ್ಯೆಗೆ ಸಂಬಂಧಿಸಿದಂತೆ ಎಸ್ಡಿಪಿಐ ನಾಲ್ವರು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೆರವೂರು ಸಿಪಿಐ ಕುಟ್ಟಿಕೃಷ್ಣನ್ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಕಳೆದವಾರ ಎಸ್ಡಿಪಿಐ ಮತ್ತು ಬಿಜೆಪಿ– ಆರ್ಎಸ್ಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯ ಮುಂದುವರಿದ ಭಾಗ ಇದಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

