ಶಿವಮೊಗ್ಗ: ಫೆ. 4 ರಂದು ಬೆಂಗಳೂರಿನಲ್ಲಿ ಯಶಸ್ವಿಯಾಗಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭ ಮಾಡುತ್ತೇವೆ ಎಂದು ಬಿಜೆಪಿ ರಾಷ್ಟ್ರೀ ಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ.
ಶನಿವಾರ ಬಿಜೆಪಿ ಪ್ರಮುಖರ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಡ್ ಇಟ್ಟುಕೊಂಡು ಜನರ ಬಳಿ ಹೋಗುತ್ತಿಲ್ಲ. ಬದಲಾಗಿ ಭಾಷೆ, ನೀರು, ಜಾತಿ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಫೆ. 4 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬಂದೇ ಬರುತ್ತಾರೆ. ಬೆಂಗಳೂರಿನಲ್ಲಿರುವ ಹೋರಾಟಗಾರರಿಗೆ ಇದುವರೆಗೂ ಮಹದಾಯಿ ನೆನಪಾಗಿರಲಿಲ್ಲ. ಆದರೆ ಈಗ ಬಿಜೆಪಿ ರ್ಯಾಲಿ ವೇಳೆ ಪ್ರತಿಭಟನೆ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

