ಪುಂಜಲಕಟ್ಟೆ: ಅವಿವಾಹಿತ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಪುಂಜಲಕಟ್ಟೆ ಪೊಲೀಸರು ಬೆಳ್ತಂಗಡಿಯ ನಡ ಗ್ರಾಮದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಕ್ಯಪದವು ನಿವಾಸಿ ಗಂಗಾಧರ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಆರೋಪಿ ಗಂಗಾಧರ ತನ್ನ ನೆರೆಮನೆಯ ಯುವತಿ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದು, ಬಳಿಕ ಯುವತಿ ಮಗುವಿಗೆ ಜನ್ಮ ನೀಡಿದ್ದಳು.
ಈ ಬಗ್ಗೆ ಯುವತಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ನೀಡಿದ್ದರು.

