ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿರುವ ವಿದ್ವತ್ ಸಹಾಯಕ್ಕಾಗಿ ಡಾ ರಾಜ್ ಕುಮಾರ್ ಕುಟುಂಬಸ್ಥರು ಮುಂದಾಗಿದ್ದಾರೆ. ವಿದ್ವತ್ ಮೇಲೆ ಹಲ್ಲೆ ಆಗಿರುವುದನ್ನು ತಿಳಿದ ತಕ್ಷಣವೇ ಆಸ್ಪತ್ರೆಗೆ ದೌಡಾಯಿಸಿದ ಗುರು ರಾಜ್ ಕುಮಾರ್ ಮೇಲೆಯೂ ಹಲ್ಲೆ ಮಾಡಲು ಹಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಪ್ರಯತ್ನಿಸಿದ್ದರು.
ಗುರು ರಾಜ್ ಕುಮಾರ್ ಅವರ ಸ್ನೇಹಿತ ವಿದ್ವತ್ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾನೂನಿನ ಮೂಲಕ ವಿದ್ವತ್ ಗೆ ನ್ಯಾಯ ಸಿಗಬೇಕೆಂದು ಹ್ಯಾಷ್ ಟ್ಯಾಗ್ ಹಾಕಿ ‘ಜಸ್ಟಿಸ್ ಫಾರ್ ವಿದ್ವತ್’ ಎಂದು ಗುರು ರಾಜ್ ಕುಮಾರ್ ಫೇಸ್ ಬುಕ್ ಅಭಿಯಾನ ಪ್ರಾರಂಭ ಮಾಡಿದ್ದಾರೆ.

