ದಿಲ್ಲಿ: ಆರ್ಥಿಕ ಅಪರಾಧಗಳ ವಿರುದ್ಧ ತಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸಾರ್ವಜನಿಕರ ಹಣವನ್ನು ಲೂಟಿ ಮಾಡಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ.
ಉದ್ಯಮಿ ನೀರವ್ ಮೋದಿ 11 ಸಾವಿರ ಕೋಟಿ ರೂ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮಾತನಾಡಿದ ಅವರು, ನೀತಿ ಹಾಗೂ ನಿಯಮಗಳನ್ನು ರೂಪಿಸುವವರು ತಮ್ಮ ಕೆಲಸಗಳನ್ನು ಶ್ರದ್ಧೆಯಿಂದ ಮಾಡಬೇಕು. ಮೇಲ್ವಿಚಾರಣೆ ನಡೆಸುವ ಅಧಿಕಾರಿಗಳು ಇದನ್ನು ಮತ್ತಷ್ಟು ವಿಶೇಷವಾಗಿ ಪಾಲಿಸಬೇಕೆಂದು ಸೂಚನೆ ನೀಡಿದ್ದಾರೆ.

