ಮಂಗಳೂರು: ನಗರದ ಹೊರವಲಯದಲ್ಲಿರುವ ಪಿಲಿಕುಳದ ಡಾ.ಶಿವರಾಮಕಾರಂತ ನಿಸರ್ಗಧಾಮದಲ್ಲಿ ಭಾರತದ ಪ್ರಥಮ ‘ಸ್ವಾಮಿ ವಿವೇಕಾನಂದ’ ತ್ರಿಡಿ 8ಕೆ ಹೈಬ್ರಿಡ್ ತಾರಾಲಯವನ್ನು ರಾಯ್ಯ ಯೋಜನೆ, ಸಾಂಖ್ಯಿಕ ಹಾಗೂ ತಂತ್ರಜ್ಞಾನ ಸಚಿವ .ಆರ್. ಸೀತಾರಾಂ ಗುರುವಾರ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಸಚಿವ ಬಿ.ರಮಾನಾಥ ರೈ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಎಚ್. ಹಿನ್ನೇಗೌಡ, ಡಾ. ಕೆ.ವಿ. ರಾವ್, ಪಿಲಿಕುಳದ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ವಿ.ಪ್ರಸನ್ನ, ಮೂಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಗೇರು ಅಭಿವೃದ್ಧಿ ನಿಗರಮದ ಅಧ್ಯಕ್ಷ ಬಿ.ಎಚ್.ಖಾದರ್ ಮತ್ತಿತರರು ಉಪಸ್ಥಿತರಿದ್ದರು.









