ಬೀದರ್: ಕಾರು ಮತ್ತು ಬೈಕಿನ ನಡುವೆ ಮುಖಾ-ಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ಸಂಭವಿಸಿದೆ.
ಮೃತರನ್ನು ಇಸ್ಮಾಯೀಲ್, ಸುಭಾಷ ಕಾಶೀನಾಥ ಹಾಗೂ ಯಲ್ಲಪ್ಪ ಎಂದು ಗುರುತಿಸಲಾಗಿದೆ.
ಬಸವಕಲ್ಯಾಣ ಕಾಲೂಕ ಕವಡಿಹಾಳ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಬಸವಕಲ್ಯಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

