ಬೆಳಗಾವಿ : ಜೆಡಿಎಸ್ ಕಾರ್ಯಕರ್ತು ಶುಭಕೋರಿ ಅಳವಡಿಸಿದ್ದ ಬ್ಯಾನರ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆ ತಾಲೂಕಿನ ಸುಳೇಭಾವ ಹಾಗೂ ಮಾರೀಹಾಳ ಗ್ರಾಮದಲ್ಲಿ ನಡೆದಿದೆ.
ಬ್ಯಾನರ್ ನಲ್ಲಿರುವ ಜೆಡಿಎಸ್ ಅಧಿಕೃತ ಅಭ್ಯರ್ಥಿ ಶಿವನಗೌಡ ಪಾಟೀಲ ಹಾಗೂ ಜೆಡಿಎಸ್ ಬ್ಲಾಕ್ ಅಧ್ಯಕ್ಷ ಉದಯ ಕೆಸರೂರ ಫೋಟೊಗಳಿಗೆ ಮಾತ್ರ ಬೆಂಕಿ ಹಚ್ಚಿ ಭಸ್ಮಗೊಳಿಸಿದ್ದು, ಕೂಡಲೇ ಈ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಮಾರೀಹಾಳ ಪೊಲೀಸರಿಗೆ ಜೆಡಿಎಸ್ ಕಾರ್ಯಕರ್ತರು ಮನವಿ ಮಾಡಿದ್ದಾರೆ.

