ಉಡುಪಿ: ದಲಿತರ ಮೇಲಿನ ದೌರ್ಜನ್ಯಗಳ ತಡೆ ಮತ್ತು ಸುಪ್ರೀಂ ಕೋರ್ಟಿನ ತೀರ್ಪನ್ನು ಹಿಂಪಡೆಯುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಇಂದು (ಎ.6) ಸಂಜೆ 5ಕ್ಕೆ ಇಲ್ಲಿನ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಧರಣಿ ಆಯೋಜಿಸಲಾಗಿದ್ದು, ಸ್ಥಳೀಯ ನಾಗರಿಕರು ಭಾಗವಹಿಸಬೇಕು ಎಂದು ಒಕ್ಕೂಟದ ಅಧ್ಯಕ್ಷ ಶ್ಯಾಮರಾಜ್ ಬಿರ್ತಿ ಪ್ರಕಟನೆಯಲ್ಲಿ ಕೋರಿದ್ದಾರೆ.
