ಅಡ್ಡೂರು: ಹಾಲಿ ಶಾಸಕ, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ.ಮೊಯಿದ್ದೀನ್ ಬಾವಾ ಗುರುವಾರ ಸಂಜೆ ಇಲ್ಲಿನ ಪ್ರಮುಖ ಬೀದಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಯು.ಪಿ.ಇಬ್ರಾಹೀಂ, ತಾ.ಪಂ. ಸದಸ್ಯ ಸಚಿನ್ ಅಡಪ, ಗುರುಪುರ ಗ್ರಾ.ಪಂ. ಅಧ್ಯಕ್ಷೆ ರುಕಿಯಾ, ಜಲೀಲ್, ಮೊಹಮ್ಮದ್, ಎ.ಕೆ.ಅಶ್ರಫ್, ವಿಜಯಲಕ್ಷ್ಮೀ ಮತ್ತಿತರರು ಭಾಗವಹಿಸಿದ್ದರು.




