ಸುದ್ದಿ9ಕಲ್ಲಡ್ಕ, ಆ. 25:ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ಪದವೀಧರ ಶಿಕ್ಷಕ ಜಯಾನಂದ ಪೆರಾಜೆ ಅವರನ್ನು ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ನಿದರ್ೇಶಕರಾಗಿ ನೇಮಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಮೇಶ್ ನಾಯಕ್ ತಿಳಿಸಿದ್ದಾರೆ.
ಅವರು ಹಿರಿಯ ಪತ್ರಕರ್ತರಾಗಿ, ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಣ ಸಂಪನ್ಮೂಲ ವ್ಯಕ್ತಿ, ತಾಲೂಕು ಸಹಶಿಕ್ಷಕರ ಸಂಘದ ಪದಾಧಿಕಾರಿಯಾಗಿದ್ದಾರೆ.

